ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 10ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಗಾರ
ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ 'ಸಕ್ಸಸ್ ಎಕ್ಸೆಲ್ರೇಟರ್ ' ಎಂಬ ಶೈಕ್ಷಣಿಕ ಕಾರ್ಯಗಾರವನ್ನು ಫೆಬ್ರವರಿ 10ರಂದು ಆಯೋಜಿಸಲಾಗಿತ್ತು .
ಕಾರ್ಯಕ್ರಮದ ಉದ್ಘಾಟನೆಯನ್ನು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಹೇಶ್ ಪ್ರಸನ್ನ ಅವರು ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳು ಒಳ್ಳೆಯ ನಡವಳಿಕೆಗಳನ್ನು ತಮ್ಮ ಜೀವನದಲ್ಲಿ ಹೇಗೆ ಪಾಲಿಸಬೇಕು ಎಂದು ತಿಳಿಸಿದರು
ಸಂಪನ್ಮೂಲ ವ್ಯಕ್ತಿಯಾದ ಡಾ. ಅಜಿತ್ ಶಂಕರ್, ಶಾಲಾ ಸಂಚಾಲಕರಾದ ಶ್ರೀ ರವಿ ನಾರಾಯಣ ಎಂ , ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀ ಹರೀಶ್ ಶಾಸ್ತ್ರಿ, ವಿವೇಕಾನಂದ ಪಾಲಿಟೆಕ್ನಿಕ್ ನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಶ್ರೀ ರವಿರಾಮ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ, ವಿವೇಕಾನಂದ ಕಾಲೇಜಿನ ಪ್ಲೇಸ್ ಮೆಂಟ್ ಅಧಿಕಾರಿ ಪ್ರೊ.ವಂದನಾ ಶಂಕರ್ ಹಾಗೂ ಉಪನ್ಯಾಸಕರದ ಶ್ರೀ ಸತೀಶ್ ಉಪಸ್ಥಿತರಿದ್ದರು.
ಬಳಿಕ ಸಂಪನ್ಮೂಲ ವ್ಯಕ್ತಿಯಾದ ಡಾ. ಅಜಿತ್ ಶಂಕರ್ ಅವರು 10ನೇ ತರಗತಿ ವಿದ್ಯಾರ್ಥಿಗಳಿಗೆ ಅಧಿವೇಶನವನ್ನು ನಡೆಸಿ ಬೋರ್ಡ್ ಪರೀಕ್ಷೆಗೆ ಸಿದ್ಧರಾಗಲು ಮಾರ್ಗದರ್ಶನ ನೀಡಿದರು .
10ನೇ ತರಗತಿ ವಿದ್ಯಾರ್ಥಿನಿಯರಾದ ಸುಪ್ರಜಾ ರಾವ್ ಪ್ರಾರ್ಥಿಸಿ , ಸಾನ್ವಿ ಪ್ರಭು ಸ್ವಾಗತಿಸಿ, ಸಾನ್ವಿ ಚನಿಲ ಅವರು ವಂದಿಸಿದರು. ಶಿಕ್ಷಕಿ ಪವಿತ್ರ ರೈ ಕಾರ್ಯಕ್ರಮ ನಿರೂಪಿಸಿದರು.