ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಸಂಸ್ಮರಣೆ.
ದಿನಾಂಕ 02-10-2025 ನೇ ಗುರುವಾರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಸಂಸ್ಮರಣೆ ಮಾಡಲಾಯಿತು. ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಭಾವಚಿತ್ರಕ್ಕೆ ಶಾಲಾ ಮುಖ್ಯ ಗುರುಗಳಾದ ಶ್ರೀ ಸತೀಶ್ ಕುಮಾರ್ ಅವರು ದೀಪ ಪ್ರಜ್ವಲನೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ನಂತರ ಗುಜರಾತಿನ ಶ್ರೇಷ್ಠ ಕವಿ ನರಸಿ ಮೆಹ್ತಾ ರವರು ರಚಿಸಿದ “ವೈಷ್ಣವ ಜನತೋ “ಎನ್ನುವ ಭಜನೆ ಗಾಂಧೀಜಿ ಅವರಿಗೆ ಅತ್ಯಂತ ಪ್ರೀತಿಯ ಗೀತೆಯಾಗಿದ್ದು, ಈ ಗೀತೆಯನ್ನು ಶಾಲಾ ಶಿಕ್ಷಕಿಯರಾದ ಸೌಮ್ಯಕುಮಾರಿ, ರೇಷ್ಮಾ, ಯಶಸ್ವಿನಿ ಹಾಗೂ ಕವಿತಾ ಹಾಡಿದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸಂಧ್ಯಾ , ಶಾಲಾ ಶಿಕ್ಷಕ ವೃಂದ , ವಿದ್ಯಾರ್ಥಿಗಳು ಸ್ಕೌಟ್ ಮತ್ತು ಗೈಡ್ಸ್ , ಎನ್.ಸಿ.ಸಿ ಕೆಡೆಟ್ ಗಳು ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.