ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಪ್ತಶಕ್ತಿ ಸಂಗಮ
ದಿನಾಂಕ 20-12-2025ನೇ ಶನಿವಾರ ವಿದ್ಯಾಭಾರತಿ ಅಖಿಲಭಾರತ ಶಿಕ್ಷಾ ಸಂಸ್ಥಾನದ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿ ಕೆ.ಜಿ.ವಿಭಾಗದ ಮಾತೆಯರಿಗೆ ಸಪ್ತಶಕ್ತಿ ಸಂಗಮ ಕಾರ್ಯಕ್ರಮವು ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಪವಿತ್ರಾ ವಿಜಯ ನಾರಾಯಣ ಇವರು ಮಾತನಾಡಿ ಪ್ರತಿಯೊಬ್ಬ ಮಹಿಳೆಯು ಕೂಡ ತನ್ನಲ್ಲಿ ಅವಿತಿರುವ ಶಕ್ತಿಯನ್ನು ಮರೆತುಬಿಟ್ಟಿರುತ್ತೇವೆ. ಸ್ತ್ರೀಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ಪುಷ್ಪಲತಾ.ಬಿ.ಕೆ ಇವರು ಮಾತನಾಡಿ ಸ್ತ್ರೀಯರು ತಮ್ಮ ಸಪ್ತಶಕ್ತಿಯನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು, ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡಬೇಕು ಎಂದರು.
ಶಾಲಾ ಕೆ.ಜಿ.ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಮತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀಮತಿ ಕಾವ್ಯಶ್ರೀ ವೈಯಕ್ತಿಕಗೀತೆಯನ್ನು ಹಾಡಿ, ಮಾತೆಯರಿಗೆ ಸಂಕಲ್ಪ ಮಾಡಿಸಿದರು. ಶಾಲೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ನಾಗಮ್ಮ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶ್ರೀಮತಿ ಸಪ್ನಾ ಸನ್ಮಾನಿತರ ಪರಿಚಯ ವಾಚಿಸಿದರು. ಶ್ರೀಮತಿ ಜ್ಯೋತಿ.ಸಿ.ಕೆ ಇವರು ರಸಪ್ರಶ್ನೆ ನಡೆಸಿಕೊಟ್ಟರು. ಶ್ರೀಮತಿ ಪ್ರತಿಭಾ ಮತ್ತು ಶ್ರೀಮತಿ ವೀಣಾ.ಎಸ್ ಬಂದಂತಹ ಮಾತೆಯರನ್ನು ಅರಿಸಿನ, ಕುಂಕುಮ, ಹೂ ನೀಡಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೌಢ ಶಾಲೆಯ ಮುಖ್ಯಗುರು ಶ್ರೀ ಸತೀಶ್ ಕುಮಾರ್ ರೈ, ಪ್ರಾಥಮಿಕ ಶಾಲಾ ಮುಖ್ಯಸ್ಥೆ ಶ್ರೀಮತಿ ಸಂಧ್ಯಾ.ಕೆ ಉಪಸ್ಥಿತರಿದ್ದರು.
ಶ್ರೀಮತಿ ಜ್ಯೋತಿ.ಸಿ.ಕೆ ಪ್ರಾರ್ಥಿಸಿ, ಶ್ರೀಮತಿ ನಿರ್ಮಲಾ ಸ್ವಾಗತಿಸಿ, ಶ್ರೀಮತಿ ಪುಷ್ಪಲತಾ.ಕೆ ವಂದಿಸಿದರು. ಶ್ರೀಮತಿ ಶ್ರೀವಿದ್ಯಾ ಕಾರ್ಯಕ್ರಮ ನಿರೂಪಿಸಿದರು.