ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಸತ್ಯ ಸಾಯಿ ಸೇವಾ ಸಂಸ್ಥೆಯ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಶಸ್ತಿಗಳು.
ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ - ಕರ್ನಾಟಕ ಉತ್ತರ ಇದರ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ‘ದೈನಂದಿನ ಜೀವನದಲ್ಲಿ ಕೃತಜ್ಞತೆಯ ಪಾತ್ರ’ ಎಂಬ ವಿಷಯದ ಮೇಲೆ ಪ್ರಬಂಧ ಸ್ಪರ್ಧೆ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದು, ವಿವಿಧ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುತ್ತಾರೆ. 9ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ.ಎಸ್ ಇವರು ಕನ್ನಡ ಪ್ರಬಂಧದಲ್ಲಿ ಜಿಲ್ಲಾ ಮಟ್ಟದಲ್ಲಿ ಎರಡನೇ ಸ್ಥಾನ ಹಾಗೂ ಸಮಿತಿ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಅಂತೆಯೇ ಎಂಟನೇ ತರಗತಿಯ ಚಾರ್ವಿ.ಯು.ಪಿ ಸಮಿತಿ ಮಟ್ಟದಲ್ಲಿ ಎರಡನೇ ಸ್ಥಾನ, ಹತ್ತನೇ ತರಗತಿಯ ಸಾನ್ವಿ. ಎಸ್. ಪ್ರಭು ಸಮಿತಿ ಮಟ್ಟದಲ್ಲಿ ಮೂರನೇ ಸ್ಥಾನವನ್ನು ಗಳಿಸಿರುತ್ತಾರೆ. ಆಂಗ್ಲ ಭಾಷೆಯಲ್ಲಿ ಪ್ರಬಂಧವನ್ನು ಬರೆದು 9ನೇ ತರಗತಿಯ ಅಮೃತ ಪಿ ನಾಯಕ್ ಸಮಿತಿ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು, ಎಂಟನೇ ತರಗತಿಯ ಶ್ರೀಯಾ.ಪಿ.ನಾಯಕ್ ದ್ವಿತೀಯ ಸ್ಥಾನವನ್ನು ಹಾಗೂ ದೀಪ್ತಿ ಕುಬನುರಾಯ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಅವರು ತಿಳಿಸಿರುತ್ತಾರೆ.