ರಾಜ್ಯಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಗಳು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ನಿಲಿಷ್ಕ.ಕೆ. ಚಿತ್ರಕಲೆಯಲ್ಲಿ ಪ್ರಥಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನರಥ/ ಜ್ಞಾನಪಥ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳು ಧರ್ಮಸ್ಥಳದಲ್ಲಿ ದಿನಾಂಕ 02-01-2026 ರಂದು ನಡೆಯಿತು. ಪೌಢ ಶಾಲಾ ವಿಭಾಗದಲ್ಲಿ ನಿಲಿಷ್ಕ. ಕೆ ( ಶ್ರೀ ದಿನೇಶ್ ನಾಯ್ಕ ಕೆ ಜಿ ಹಾಗೂ ಶ್ರೀಮತಿ ಸ್ಮಿತಾಶ್ರೀ)ಚಿತ್ರಕಲೆಯಲ್ಲಿ ಪಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.