ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನಗಳು
ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಒಕ್ಕಲಿಗ ಗೌಡ ಸೇವಾ ಸಂಘ (ರಿ )ಪುತ್ತೂರು ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ದಿನಾಚರಣೆ ಪ್ರಯುಕ್ತ ಶಿಕ್ಷಣ ಇಲಾಖೆಯ ವತಿಯಿಂದ ಹಲವಾರು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದು ಹಲವಾರು ಬಹುಮಾನಗಳನ್ನು ಪಡೆದಿರುತ್ತಾರೆ. ಆರಾಧ್ಯ ಕೃಷ್ಣ 7ನೇ ತರಗತಿ ಇವರು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು, ಯಜ್ವೈ 7ನೇ ತರಗತಿ ಚಿತ್ರಕಲೆಯಲ್ಲಿ ತೃತೀಯ ಸ್ಥಾನವನ್ನು, ಮಹಿಮಾ ಎ 7ನೇ ತರಗತಿ ಇವರು ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.