ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾರಂಭೋತ್ಸವ.
ಸಕಲ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸಲು ಭಗವದನುಗ್ರಹ ಇರಬೇಕು. ಈ ನಿಟ್ಟಿನಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾರಂಭೋತ್ಸವವನ್ನು ಮೇ 30ರಂದು ಗಣಹವನದ ಮೂಲಕ ಆರಂಭಿಸಲಾಯಿತು. ಪೋಷಕರಾದ ಶ್ರೀ ಹರಿಪ್ರಸಾದ್ ವೈಲಾಯ ಮತ್ತು ಬಳಗದವರು ಯಜ್ಞ ಕಾರ್ಯ ನೆರವೇರಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ದಂಪತಿಗಳು ಹವನದ ಕರ್ತೃತ್ವ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.