ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತಯಂತ್ರದ ಮೂಲಕ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ.
ಶಾಲಾ ಜೀವನದಲ್ಲಿಯೇ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತಯಂತ್ರದ ಮೂಲಕ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ ನಡೆಯಿತು. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ನಾಯಕರಾಗಿ 10ನೇ ತರಗತಿಯ ಅನುರಾಗ್ ಹಳೇಮನಿ ಹಾಗೂ ಉಪನಾಯಕರಾಗಿ 9ನೇ ತರಗತಿಯ ಸಾನ್ವಿ ಆನಂದ್ ಆಯ್ಕೆಯಾದರು. ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿ ನಾಯಕನಾಗಿ 7ನೇ ತರಗತಿಯ ರಿತ್ವಿಕ್ ಆರ್ ರೈ ಹಾಗೂ ಉಪನಾಯಕರಾಗಿ 6ನೇ ತರಗತಿಯ ಶ್ಯಾಮ್ ಕಿರಣ್ ಆಯ್ಕೆಯಾದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾರಾದ ಶ್ರೀ ಸತೀಶ್ ಕುಮಾರ್ ರೈಯವರ ಮಾರ್ಗದರ್ಶನದಲ್ಲಿ ಹಿರಿಯ ಶಿಕ್ಷಕರಾದ ಶ್ರೀ ಪ್ರಶಾಂತ್ ಭಟ್, ಶ್ರೀ ಭಾಸ್ಕರ್ ಗೌಡ, ಶ್ರೀಮತಿ ಪ್ರತಿಮಾ, ಶ್ರೀಮತಿ ಜ್ಯೋತಿಲಕ್ಷ್ಮಿ ಶ್ರೀಮತಿ ಪೂಜಾಶ್ರೀ ಮತ್ತು ಇತರ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಮತದಾನ ಪ್ರಕ್ರಿಯೆಯಲ್ಲಿ ಸಹಕರಿಸಿದ್ದರು.
ಅನುರಾಗ್ ಹಳೇಮನಿ
ಸಾನ್ವಿ ಆನಂದ್
ರಿತ್ವಿಕ್ ಆರ್ ರೈ
ಶ್ಯಾಮ್ ಕಿರಣ್