ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ವಿದ್ಯಾರ್ಥಿ
ಕರ್ನಾಟಕ ಸರಕಾರದ ಶಿಕ್ಷಣ ಇಲಾಖೆ, ಉರ್ದು ಮತ್ತು ಇತರ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಮೂಲಕ ಆಯೋಜಿಸಿರುವ ಪುತ್ತೂರು ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿಯು, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಸಂತ ವಿಕ್ಟರನ ಬಾಲಿಕಾ ಪ್ರೌಢ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 01.09.2025 ರಂದು ನಡೆಯಿತು.
ಪುತ್ತೂರು ತಾಲೂಕಿನ ವಿವಿಧ ಪ್ರೌಢ ಶಾಲೆಗಳಿಂದ ಹಲವಾರು ಪ್ರತಿಭಾನ್ವಿತ ವಿದ್ಯಾರ್ಥಿಗಳು ಭಾಗವಹಿಸಿ “ಕ್ವಾಂಟಮ್ ಯುಗದ ಆರಂಭ: ಸಾಮರ್ಥ್ಯಗಳು ಮತ್ತು ಸವಾಲುಗಳು” ಎಂಬ ವಿಚಾರದ ಬಗ್ಗೆ ವಿಷಯವನ್ನು ಮಂಡಿಸಿದರು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ 9 ನೇ ತರಗತಿ ವಿದ್ಯಾರ್ಥಿ ಅತೀತ್ ಹೆಚ್. ರೈ ( ಶ್ರೀ ಹರೀಶ್ ರೈ ಮತ್ತು ಶ್ರೀಮತಿ ಜಲಜಾ ಹೆಚ್ ರೈ ದಂಪತಿ ಪುತ್ರ) ಅವರ ವಿಷಯ ಮಂಡನೆಗೆ ದ್ವಿತೀಯ ಸ್ಥಾನ ಲಭಿಸಿರುವುದು ಶಾಲೆಗೆ ಅತ್ಯಂತ ಕೀರ್ತಿದಾಯಕವಾಗಿದೆ. ಅತೀತ್ ಅವರ ಪ್ರಸ್ತುತಿಯನ್ನು ತೀರ್ಪುಗಾರರು ಜ್ಞಾನಸಮೃದ್ಧಿ ಮತ್ತು ಪರಿಣಾಮಕಾರಿಯೆಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರು ಅತೀತ್ ರೈ ಅವರ ಈ ಶ್ರೇಷ್ಠ ಸಾಧನೆಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದರು.