"ಒಂದು ಭೂಮಿ, ಒಂದು ಆರೋಗ್ಯ". ಯೋಗಬಲ್ಲವರಿಗೆ ರೋಗವಿಲ್ಲ.
ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯವನ್ನು ಉಳಿಸಿಕೊಳ್ಳಲು ಯೋಗಾಭ್ಯಾಸ ಅತ್ಯಂತ ಅವಶ್ಯ ಅವಶ್ಯ ಮಾರ್ಗವಾಗಿದೆ. ಈ ನಿಟ್ಟಿನಲ್ಲಿ "ಒಂದು ಭೂಮಿ, ಒಂದು ಆರೋಗ್ಯ" ಎಂಬ ಧ್ಯೇಯ ವಾಕ್ಯದೊಂದಿಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಭಾಸ್ಕರ ಗೌಡರ ಮಾರ್ಗದರ್ಶದಲ್ಲಿ ವಿವಿಧ ಅವಧಿಗಳಲ್ಲಿ ಕಿರಿಯ, ಹಿರಿಯ ಪ್ರಾಥಮಿಕ, ಪ್ರೌಢಶಾಲಾ ತರಗತಿವಾರು ಯೋಗ ಪ್ರದರ್ಶನ ನಡೆಸಲಾಯಿತು. ಪ್ರಾಥಮಿಕ ಶಾಲಾ ವಿಭಾಗ ಮುಖ್ಯಸ್ಥೆ ಶ್ರೀಮತಿ ಸಂಧ್ಯಾ, ಪೂರ್ವ ಪ್ರಾಥಮಿಕ ವಿಭಾಗ ಮುಖ್ಯಸ್ಥೆ ಶ್ರೀಮತಿ ಮಮತಾ, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮತಿ ವಾಣಿಶ್ರೀ, ಶ್ರೀಮತಿ ಆಶಾಲತಾ, ಶ್ರೀ ದೀಪಕ್, ಶ್ರೀಮತಿ ರಶ್ಮಿ, ಶ್ರೀಮತಿ ಪೂಜಾಶ್ರೀ ಮತ್ತು ಶಿಕ್ಷಕ ವೃಂದದವರು ಸಹಕರಿಸಿದರು.